<p><strong>ಬೆಂಗಳೂರು:</strong> ‘ಕೊರೊನಾ ನಿಯಂತ್ರಣದ ಉಪಕರಣಗಳ ಖರೀದಿ ಅವ್ಯವಹಾರದ ಬಗ್ಗೆ ನನ್ನ ಆರೋಪಕ್ಕೆ ಉತ್ತರ ನೀಡಲು ಯತ್ನಿಸಿರುವ ಇಬ್ಬರು ಸಚಿವರು ಸತ್ಯ ಬಿಚ್ಚಿಡುವ ಬದಲಿಗೆ ಸುಳ್ಳನ್ನು ಮುಚ್ಚಿಡಲು ಪರದಾಡಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.</p>.<p>ಸರಣಿ ಟ್ವೀಟ್ ಮಾಡಿರುವ ಅವರು, ‘ಈವರೆಗೆ ₹323 ಕೋಟಿ ಖರ್ಚು ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದರೆ, ಅವರು ನೀಡಿರುವ ಲೆಕ್ಕವನ್ನು ಎಷ್ಟೇ ಕೂಡಿದರೂ ಅದು ₹100 ಕೋಟಿ ದಾಟುವುದಿಲ್ಲ. ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಕೊರೊನಾ ನಿಯಂತ್ರಣಕ್ಕಾಗಿನ ಸಲಕರಣೆಗಳ ಲೆಕ್ಕವನ್ನಷ್ಟೇ ನಾನು ಕೇಳಿದ್ದಲ್ಲ. ಆಹಾರ ಧಾನ್ಯ ಮತ್ತು ಆಹಾರ ಸಾಮಗ್ರಿಗಳ ಕಿಟ್ ಮತ್ತು ಆಸ್ಪತ್ರೆಗಳಿಗೆ ಖರೀದಿಸಲಾದ ಹಾಸಿಗೆಗಳ ಬೆಲೆ, ಕ್ವಾರಂಟೈನ್ ಕೇಂದ್ರಗಳು, ಐಸೋಲೇಷನ್ ವಾರ್ಡ್ಗಳಿಗೆ ಆಗಿರುವ ಖರ್ಚಿನ ವಿವರವನ್ನೂ ಕೇಳಿದ್ದೇನೆ. ಆ ಲೆಕ್ಕ ಎಲ್ಲಿದೆ’ ಎಂದು ಕೇಳಿದ್ದಾರೆ.</p>.<p>‘ಪಿ.ಎಂ.ಕೇರ್ಸ್ ನಿಧಿಯಡಿ ಕೇಂದ್ರ ಸರ್ಕಾರ ತಲಾ ₹4 ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ. ನಮ್ಮಲ್ಲಿ ₹12 ಲಕ್ಷದಿಂದ ₹18 ಲಕ್ಷ ಕೊಟ್ಟು ಖರೀದಿಸಲಾಗಿದೆ. ಇವುಗಳ ಅಂತಹ ಬೆಲೆಯಲ್ಲಿ ವ್ಯತ್ಯಾಸ ಏಕೆ’ ಎಂದು ಕೆಣಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೊರೊನಾ ನಿಯಂತ್ರಣದ ಉಪಕರಣಗಳ ಖರೀದಿ ಅವ್ಯವಹಾರದ ಬಗ್ಗೆ ನನ್ನ ಆರೋಪಕ್ಕೆ ಉತ್ತರ ನೀಡಲು ಯತ್ನಿಸಿರುವ ಇಬ್ಬರು ಸಚಿವರು ಸತ್ಯ ಬಿಚ್ಚಿಡುವ ಬದಲಿಗೆ ಸುಳ್ಳನ್ನು ಮುಚ್ಚಿಡಲು ಪರದಾಡಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.</p>.<p>ಸರಣಿ ಟ್ವೀಟ್ ಮಾಡಿರುವ ಅವರು, ‘ಈವರೆಗೆ ₹323 ಕೋಟಿ ಖರ್ಚು ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದರೆ, ಅವರು ನೀಡಿರುವ ಲೆಕ್ಕವನ್ನು ಎಷ್ಟೇ ಕೂಡಿದರೂ ಅದು ₹100 ಕೋಟಿ ದಾಟುವುದಿಲ್ಲ. ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಕೊರೊನಾ ನಿಯಂತ್ರಣಕ್ಕಾಗಿನ ಸಲಕರಣೆಗಳ ಲೆಕ್ಕವನ್ನಷ್ಟೇ ನಾನು ಕೇಳಿದ್ದಲ್ಲ. ಆಹಾರ ಧಾನ್ಯ ಮತ್ತು ಆಹಾರ ಸಾಮಗ್ರಿಗಳ ಕಿಟ್ ಮತ್ತು ಆಸ್ಪತ್ರೆಗಳಿಗೆ ಖರೀದಿಸಲಾದ ಹಾಸಿಗೆಗಳ ಬೆಲೆ, ಕ್ವಾರಂಟೈನ್ ಕೇಂದ್ರಗಳು, ಐಸೋಲೇಷನ್ ವಾರ್ಡ್ಗಳಿಗೆ ಆಗಿರುವ ಖರ್ಚಿನ ವಿವರವನ್ನೂ ಕೇಳಿದ್ದೇನೆ. ಆ ಲೆಕ್ಕ ಎಲ್ಲಿದೆ’ ಎಂದು ಕೇಳಿದ್ದಾರೆ.</p>.<p>‘ಪಿ.ಎಂ.ಕೇರ್ಸ್ ನಿಧಿಯಡಿ ಕೇಂದ್ರ ಸರ್ಕಾರ ತಲಾ ₹4 ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ. ನಮ್ಮಲ್ಲಿ ₹12 ಲಕ್ಷದಿಂದ ₹18 ಲಕ್ಷ ಕೊಟ್ಟು ಖರೀದಿಸಲಾಗಿದೆ. ಇವುಗಳ ಅಂತಹ ಬೆಲೆಯಲ್ಲಿ ವ್ಯತ್ಯಾಸ ಏಕೆ’ ಎಂದು ಕೆಣಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>