ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,‘ಪರಿಹಾರ ಕೋರಿ 1.51 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಅಧಿಕೃತ ಮಾಹಿತಿ ಸರ್ಕಾರದ ಬಳಿ ಇಲ್ಲದಿರುವುದು ಪರಿಹಾರ ನೀಡಲು ತೊಡಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳೀಕರಣ ಮಾಡಲಾಗಿದ್ದು, ಅರ್ಜಿಯ ಜತೆ ಆಧಾರ್ ಹಾಗೂ ಬ್ಯಾಂಕ್ ಖಾತೆ ವಿವರ ನೀಡಿದರೆ ಸಾಕು’ ಎಂದರು.