ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) ಮತ್ತು ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಏ.25ರಂದು ಚಾಲನೆ ನೀಡಲಾಗಿತ್ತು. ನಗರದ ವಿಕ್ಟೋರಿಯಾ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆಸಿದ ಪ್ಲಾಸ್ಮಾ ಥೆರಪಿಗಳು ಯಶಸ್ವಿಯಾಗಿವೆ. ಗಂಭೀರ ಸ್ಥಿತಿ ತಲುಪಿದ ಕೆಲ ರೋಗಿಗಳು ಥೆರಪಿ ಬಳಿಕ ಚೇತರಿಸಿಕೊಂಡ ಉದಾಹರಣೆಗಳಿವೆ. ಹೀಗಾಗಿ ಇನ್ನಷ್ಟು ಮಂದಿಗೆ ಪ್ಲಾಸ್ಮಾ ಥೆರಪಿ ಮಾಡಲು ಅವಕಾಶ ನೀಡಲಾಗಿದೆ. ಕ್ಯಾನ್ಸರ್ ತಜ್ಞ ಡಾ. ವಿಶಾಲ್ ರಾವ್ ಅವರು ಪ್ಲಾಸ್ಮಾ ಥೆರಪಿಯಕ್ಲಿನಿಕಲ್ ಪ್ರಯೋಗದ ಮುಖ್ಯಸ್ಥರಾಗಿದ್ದು, ಅವರ ನೇತೃತ್ವದ ವೈದ್ಯರ ತಂಡವು ಕೋವಿಡ್ನಿಂದ ಹೆಚ್ಚಿನ ಪ್ರಮಾಣದಲ್ಲಿ ಅಸ್ವಸ್ಥರಾದ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ನಡೆಸುತ್ತಿದೆ.