ಸೋಮಣ್ಣ ಹಾಗೂ ಅವರ ಪತ್ನಿಯ ವಿರುದ್ಧ ತನಿಖೆಯನ್ನು ಮುಂದುವರಿಸದಂತೆ 2017ರಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ರಾಜ್ಯ ಲೋಕಾಯುಕ್ತ ಪೊಲೀಸರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಲೋಕಾಯುಕ್ತ ಪೊಲೀಸರೇ ವಿಚಾರಣೆಯನ್ನು ಮುಂದುವರಿಸದಂತೆ ಮನವಿ ಮಾಡಿದ್ದರಿಂದ, ಕೋರ್ಟ್ ಪ್ರಕರಣವನ್ನು ಮುಕ್ತಾಯಗೊಳಿಸಿದೆ.