ಈ ವಿಷಯವನ್ನು ಸೋಮವಾರ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ‘ಜುಲೈ 15ರ ಬೆಳಿಗ್ಗೆ 10ರಿಂದ 24 ರಾತ್ರಿ 8ರವರೆಗೆ ಈ ಲಾಕ್ಡೌನ್ ಜಾರಿಯಲ್ಲಿರಲಿದೆ. ಹೀಗಾಗಿ ಜಿಲ್ಲೆಯಿಂದ ಹೊರಹೋಗುವವರಿಗೆ ಮತ್ತು ಒಳಬರುವವರಿಗೆ ಒಂದು ದಿನದ ಕಾಲಾವಕಾಶ ನೀಡಲಾಗಿದೆ. ಲಾಕ್ಡೌನ್ ಜಾರಿಯಾದ ನಂತರ ಅಂತರ ಜಿಲ್ಲಾ ಪಾಸ್ ಪಡೆಯುವುದನ್ನುಕಡ್ಡಾಯ ಗೊಳಿಸಲಾಗುವುದು. ಈ ಅವಧಿಯಲ್ಲಿ ನಿರ್ಮಾಣ ಕಾಮಗಾರಿ, ಕೈಗಾರಿಕಾ ಚಟುವಟಿಕೆ, ಜೀವನಾವಶ್ಯಕ ವಸ್ತುಗಳ ಪೂರೈಕೆಗೆ ವಿನಾಯಿತಿ ಇರಲಿದೆ’ ಎಂದರು.