ಜುಲೈ 16ರಂದು ಮನೆಯಿಂದ ಹೊರಗೆ ಬಂದಿದ್ದ ಪ್ರತಾಪ್, ಸುದ್ದಿ ವಾಹಿನಿಯೊಂದರ ಸಂದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೋಂ ಕ್ವಾರಂಟೈನ್ನಲ್ಲಿದ್ದರೂ ಕಾರ್ಯಕ್ರಮಕ್ಕೆ ಬಂದಿರುವುದಾಗಿ ಅವರು ತಿಳಿಸಿದ್ದರು. ಕೈ ಮೇಲೆ ಕ್ವಾರಂಟೈನ್ ಮುದ್ರೆ ಸಹ ಇತ್ತು. ನಿಯಮ ಉಲ್ಲಂಘಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಪಶುವೈದ್ಯ ಮತ್ತು ವಿಧಿವಿಜ್ಞಾನ ತಜ್ಞರೂ ಆಗಿರುವ ಡಾ. ಎಚ್.ಎಸ್. ಪ್ರಯಾಗ್, ತಲಘಟ್ಟಪುರ ಠಾಣೆಗೆ ದೂರು ನೀಡಿದ್ದರು.