<p><strong>ಮೈಸೂರು</strong>: ‘ಹ್ಯೂಬ್ಲೊ ವಾಚನ್ನು ಸರ್ಕಾರದ ದುಡ್ಡಲ್ಲಿ ಖರೀದಿಸಿರಲಿಲ್ಲ. ಲೂಟಿ ಹೊಡೆದಿದ್ದ ದುಡ್ಡು ಅದಲ್ಲ. ಈ ವಿಚಾರವಾಗಿ ಈಗಾಗಲೇ ಎಸಿಬಿ ಕ್ಲೀನ್ ಚಿಟ್ ಕೊಟ್ಟಿದೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಇಲ್ಲಿ ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು.</p>.<p>‘ಯಾರೋ ಗಿಫ್ಟ್ ಕೊಟ್ಟಿದ್ದು. ಅದು ಮುಗಿದು ಹೋದ ಅಧ್ಯಾಯ. ಜನರನ್ನು ದಾರಿ ತಪ್ಪಿಸಲಿಕ್ಕಾಗಿಯೇ ಬಿಜೆಪಿ ನಾಯಕರು ಇಂತಹ ಹೇಳಿಕೆ ಕೊಡ್ತಿದ್ದಾರೆ. ನಾನು ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಳೆಯ ಪ್ರಕರಣಗಳನ್ನು ಪ್ರಸ್ತಾಪಿಸಲೇ’ ಎಂದು ಕೆಣಕಿದರು.</p>.<p>‘ಡಿ.ಕೆ.ಶಿವಕುಮಾರ್ ತಪ್ಪಿತಸ್ಥರಲ್ಲ. ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿದೆ. ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ಬಿಜೆಪಿಯವರ ನೈತಿಕತೆ ಗೊತ್ತಿದೆ. ಅವರ ಹೇಳಿಕೆಗೆ ಯಾವ ಪ್ರತಿಕ್ರಿಯೆಯನ್ನು ಕೊಡಲ್ಲ’ ಎಂದರು.</p>.<p><strong>ಡೋಂಟ್ ಕೇರ್:</strong> ‘ನನ್ನ ಆರೋಪ ಇರುವುದು ಮುಖ್ಯಮಂತ್ರಿ, ಸಚಿವರ ವಿರುದ್ಧ. ಯಾವನೋ ರವಿಕುಮಾರ್ ಅಂತೆ. ನಂಗೆ ನೋಟಿಸ್ ಕೊಟ್ಟವನೆ. ನಾನು ಲಾಯರ್. ಆ ನೋಟಿಸ್ ಬಂಡವಾಳ ಗೊತ್ತಿದೆ. ಡೋಂಟ್ ಕೇರ್’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಹ್ಯೂಬ್ಲೊ ವಾಚನ್ನು ಸರ್ಕಾರದ ದುಡ್ಡಲ್ಲಿ ಖರೀದಿಸಿರಲಿಲ್ಲ. ಲೂಟಿ ಹೊಡೆದಿದ್ದ ದುಡ್ಡು ಅದಲ್ಲ. ಈ ವಿಚಾರವಾಗಿ ಈಗಾಗಲೇ ಎಸಿಬಿ ಕ್ಲೀನ್ ಚಿಟ್ ಕೊಟ್ಟಿದೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಇಲ್ಲಿ ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು.</p>.<p>‘ಯಾರೋ ಗಿಫ್ಟ್ ಕೊಟ್ಟಿದ್ದು. ಅದು ಮುಗಿದು ಹೋದ ಅಧ್ಯಾಯ. ಜನರನ್ನು ದಾರಿ ತಪ್ಪಿಸಲಿಕ್ಕಾಗಿಯೇ ಬಿಜೆಪಿ ನಾಯಕರು ಇಂತಹ ಹೇಳಿಕೆ ಕೊಡ್ತಿದ್ದಾರೆ. ನಾನು ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಳೆಯ ಪ್ರಕರಣಗಳನ್ನು ಪ್ರಸ್ತಾಪಿಸಲೇ’ ಎಂದು ಕೆಣಕಿದರು.</p>.<p>‘ಡಿ.ಕೆ.ಶಿವಕುಮಾರ್ ತಪ್ಪಿತಸ್ಥರಲ್ಲ. ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿದೆ. ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ಬಿಜೆಪಿಯವರ ನೈತಿಕತೆ ಗೊತ್ತಿದೆ. ಅವರ ಹೇಳಿಕೆಗೆ ಯಾವ ಪ್ರತಿಕ್ರಿಯೆಯನ್ನು ಕೊಡಲ್ಲ’ ಎಂದರು.</p>.<p><strong>ಡೋಂಟ್ ಕೇರ್:</strong> ‘ನನ್ನ ಆರೋಪ ಇರುವುದು ಮುಖ್ಯಮಂತ್ರಿ, ಸಚಿವರ ವಿರುದ್ಧ. ಯಾವನೋ ರವಿಕುಮಾರ್ ಅಂತೆ. ನಂಗೆ ನೋಟಿಸ್ ಕೊಟ್ಟವನೆ. ನಾನು ಲಾಯರ್. ಆ ನೋಟಿಸ್ ಬಂಡವಾಳ ಗೊತ್ತಿದೆ. ಡೋಂಟ್ ಕೇರ್’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>