<p><strong>ಬೆಂಗಳೂರು</strong>: ತಾಳಿ ಕಟ್ಟಿಸಿಕೊಳ್ಳಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಬಾಲಕಿಯೊಬ್ಬಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ರೌಡಿ ಮುನಿರಾಜು ಅಲಿಯಾಸ್ ಅಭಿಗೌಡ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಗಿರಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ರಾಜಾಜಿನಗರ ಠಾಣೆ ರೌಡಿ ಪಟ್ಟಿಯಲ್ಲಿ ಹೆಸರಿರುವ ಅಭಿಗೌಡನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>’ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿ ಪೋಷಕರ ಜೊತೆ ವಾಸವಿದ್ದಳು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿದ್ದ ಆರೋಪಿ, ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ನಂತರ ಆಗಾಗ ಆಕೆಯನ್ನು ಭೇಟಿ ಮಾಡುತ್ತಿದ್ದ.’</p>.<p>‘ಕೈಯಲ್ಲಿ ತಾಳಿ ಹಿಡಿದುಕೊಂಡು ಸೋಮವಾರ ಬೆಳಿಗ್ಗೆ ಬಾಲಕಿಯ ಮನೆಗೆ ಹೋಗಿದ್ದ ಆರೋಪಿ, ‘ಮದುವೆಯಾಗೋಣ ಬಾ’ ಎಂದಿದ್ದ. ಅದಕ್ಕೆ ಆಕೆ ಒಪ್ಪಿರಲಿಲ್ಲ. ಸಿಟ್ಟಾದ ಆರೋಪಿ, ಆಕೆಯನ್ನು ಅಪಹರಿಸಿ ಗಿರಿನಗರದಲ್ಲಿರುವ ತನ್ನ ಸ್ನೇಹಿತನ ಮನೆಗೆ ಕರೆತಂದು ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಸ್ನೇಹಿತನ ಮನೆಯಲ್ಲಿ ಬಾಲಕಿಗೆ ತಾಳಿ ಕಟ್ಟಲು ಆರೋಪಿ ಮುಂದಾಗಿದ್ದ. ಅದನ್ನು ವಿರೋಧಿಸಿದ್ದ ಆಕೆ, ತಪ್ಪಿಸಿಕೊಳ್ಳಲು ಯತ್ನಿಸಿದ್ದಳು. ಅದೇ ವೇಳೆ ಆರೋಪಿ, ಆಕೆಯ ಹೊಟ್ಟೆಗೆ ಐದಾರು ಬಾರಿ ಚಾಕುವಿನಿಂದ ಇರಿದಿದ್ದ. ಸ್ಥಳದಲ್ಲಿ ಕುಸಿದು ಬಿದ್ದ ಬಾಲಕಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ.’</p>.<p>‘ಗಲಾಟೆ ಶಬ್ಧ ಕೇಳಿದ್ದ ಮನೆ ಮಾಲೀಕರು ಸ್ಥಳಕ್ಕೆ ಹೋಗಿದ್ದರು. ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಾಳಿ ಕಟ್ಟಿಸಿಕೊಳ್ಳಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಬಾಲಕಿಯೊಬ್ಬಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ರೌಡಿ ಮುನಿರಾಜು ಅಲಿಯಾಸ್ ಅಭಿಗೌಡ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಗಿರಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ರಾಜಾಜಿನಗರ ಠಾಣೆ ರೌಡಿ ಪಟ್ಟಿಯಲ್ಲಿ ಹೆಸರಿರುವ ಅಭಿಗೌಡನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>’ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿ ಪೋಷಕರ ಜೊತೆ ವಾಸವಿದ್ದಳು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿದ್ದ ಆರೋಪಿ, ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ನಂತರ ಆಗಾಗ ಆಕೆಯನ್ನು ಭೇಟಿ ಮಾಡುತ್ತಿದ್ದ.’</p>.<p>‘ಕೈಯಲ್ಲಿ ತಾಳಿ ಹಿಡಿದುಕೊಂಡು ಸೋಮವಾರ ಬೆಳಿಗ್ಗೆ ಬಾಲಕಿಯ ಮನೆಗೆ ಹೋಗಿದ್ದ ಆರೋಪಿ, ‘ಮದುವೆಯಾಗೋಣ ಬಾ’ ಎಂದಿದ್ದ. ಅದಕ್ಕೆ ಆಕೆ ಒಪ್ಪಿರಲಿಲ್ಲ. ಸಿಟ್ಟಾದ ಆರೋಪಿ, ಆಕೆಯನ್ನು ಅಪಹರಿಸಿ ಗಿರಿನಗರದಲ್ಲಿರುವ ತನ್ನ ಸ್ನೇಹಿತನ ಮನೆಗೆ ಕರೆತಂದು ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಸ್ನೇಹಿತನ ಮನೆಯಲ್ಲಿ ಬಾಲಕಿಗೆ ತಾಳಿ ಕಟ್ಟಲು ಆರೋಪಿ ಮುಂದಾಗಿದ್ದ. ಅದನ್ನು ವಿರೋಧಿಸಿದ್ದ ಆಕೆ, ತಪ್ಪಿಸಿಕೊಳ್ಳಲು ಯತ್ನಿಸಿದ್ದಳು. ಅದೇ ವೇಳೆ ಆರೋಪಿ, ಆಕೆಯ ಹೊಟ್ಟೆಗೆ ಐದಾರು ಬಾರಿ ಚಾಕುವಿನಿಂದ ಇರಿದಿದ್ದ. ಸ್ಥಳದಲ್ಲಿ ಕುಸಿದು ಬಿದ್ದ ಬಾಲಕಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ.’</p>.<p>‘ಗಲಾಟೆ ಶಬ್ಧ ಕೇಳಿದ್ದ ಮನೆ ಮಾಲೀಕರು ಸ್ಥಳಕ್ಕೆ ಹೋಗಿದ್ದರು. ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>