2019ರಡಿಸೆಂಬರ್ 22ರಂದು ಟೌನ್ ಹಾಲ್ ಬಳಿ ರ್ಯಾಲಿಯನ್ನು ಸಂಸದ ತೇಜಸ್ವಿ ಸೂರ್ಯ ಆಯೋಜಿಸಿದ್ದರು.ಇದರಲ್ಲಿ ಪಾಲ್ಗೊಂಡಿದ್ದ ವರುಣ್ ಎಂಬವರನ್ನು ಹಿಂಬಾಲಿಸಿಕೊಂಡು ಹೋಗಿ ದಾಳಿ ಮಾಡಲಾಗಿದೆ ಎಂಬ ಆರೋಪದಲ್ಲಿ ಮೊಹಮದ್ ಇರ್ಫಾನ್, ಅಕ್ಬರ್ ಪಾಷಾ, ಸೈಯದ್ ಸಿದ್ಧಿಕಿ ಮತ್ತು ಸನಾಉಲ್ಲಾ ಶರೀಫ್ ಎಂಬುರನ್ನು ಪೊಲೀಸರು ಬಂಧಿಸಿದ್ದರು. ಜನವರಿ 12ರಂದು ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.