ಕೆಲವು ತಿಂಗಳ ಹಿಂದೆ, ಆಡಳಿತಾರೂಢ ಬಿಜೆಪಿ ಶಾಸಕರು, ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ಕೈ ಬಿಡುವಂತೆ ಒತ್ತಾಯಿಸಿದ್ದಲ್ಲದೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿಯನ್ನೂ ಸಲ್ಲಿಸಿದರು. ಇದು ಪರ–ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ತಜ್ಞರ ಸಮಿತಿಯು, ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ಗೆ ಸಂಬಂಧಿಸಿದ ಯಾವುದೇ ಅಧ್ಯಾಯವನ್ನು ಕೈ ಬಿಡದಂತೆ ಸಲಹೆ ನೀಡಿದ್ದನ್ನು ಸ್ಮರಿಸಬಹುದು.