‘2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಕ್ಷೇತ್ರಗಳ ವ್ಯಾಪ್ತಿಯಲ್ಲಾದರೂ ನೀವು ಕ್ರಿಯಾಶೀಲರಾಗಿ. ಕೇಂದ್ರ, ರಾಜ್ಯದ ಬಿಜೆಪಿ ಸರ್ಕಾರಗಳು ಬಡವರು, ರೈತರ ವಿರೋಧಿಯಾಗಿ ತೆಗೆದುಕೊಂಡಿರುವ ನಿರ್ಣಯಗಳ ಬಗ್ಗೆ ಪ್ರಚಾರ ಮಾಡಿ, ಭೂಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಗಳು ರೈತರಿಗೆ ಮಾರಕ ಎಂಬುದನ್ನು ಯುವಕರಿಗೆ ಅರ್ಥ ಮಾಡಿಸಿ, ಜನಸ್ಪಂದನೆಯಲ್ಲಿ ತೊಡಗಿಕೊಳ್ಳಿ’ ಎಂದು ದೇವೇಗೌಡರು ಮನವಿ ಮಾಡಿದ್ದಾರೆ.