<p><strong>ಬೆಂಗಳೂರು</strong>: ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವ ಗಣ್ಯರು ಮತ್ತು ಪ್ರಭಾವಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಕಾಯ್ದೆ ಉಲ್ಲಂಘನೆ ಮಾಡಿರುವರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಜು.24ರೊಳಗೆ ವರದಿ ಸಲ್ಲಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ತಿಳಿಸಿದೆ.</p>.<p>‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಆಯೋಜಿಸಿದ್ದ ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ರಾಜಕೀಯ ಪಕ್ಷವೊಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲೂ ಅಂತರ ಕಾಯ್ದುಕೊಳ್ಳುವ ನಿಯಮ ಪಾಲನೆಯಾಗಿಲ್ಲ’ ಎಂದು ಚಿತ್ರಗಳ ಸಹಿತವಕೀಲ ಜಿ.ಆರ್. ಮೋಹನ್ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವ ಗಣ್ಯರು ಮತ್ತು ಪ್ರಭಾವಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಕಾಯ್ದೆ ಉಲ್ಲಂಘನೆ ಮಾಡಿರುವರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಜು.24ರೊಳಗೆ ವರದಿ ಸಲ್ಲಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ತಿಳಿಸಿದೆ.</p>.<p>‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಆಯೋಜಿಸಿದ್ದ ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ರಾಜಕೀಯ ಪಕ್ಷವೊಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲೂ ಅಂತರ ಕಾಯ್ದುಕೊಳ್ಳುವ ನಿಯಮ ಪಾಲನೆಯಾಗಿಲ್ಲ’ ಎಂದು ಚಿತ್ರಗಳ ಸಹಿತವಕೀಲ ಜಿ.ಆರ್. ಮೋಹನ್ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>