<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಾವೇರಿ ನದಿಯೂ ಸೇರಿದಂತೆ ಹಳ್ಳ, ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.</p>.<p>ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಲೇ ಇದ್ದು ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ 2,500 ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಯಿತು.</p>.<p>ನದಿಯ ಅಚ್ಚುಕಟ್ಟು ಭಾಗದ ಜನರಿಗೆ ಸೈರನ್ ಹಾಕುವ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಯಿತು. ಕ್ರಸ್ಟ್ಗೇಟ್ ತೆರೆಯುವ ಮೊದಲು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪೂಜೆ ಸಲ್ಲಿಸಿದರು.</p>.<p>ಜಲಾಶಯದ ಗರಿಷ್ಠ ಮಟ್ಟವು 2,859 ಅಡಿಯಾಗಿದ್ದು, ಶುಕ್ರವಾರ ಬೆಳಿಗ್ಗೆಯ ವೇಳೆಗೆ 2,854 ಅಡಿ ನೀರು ಸಂಗ್ರಹವಿತ್ತು. ಜಲಾಶಯಕ್ಕೆ 4,864 ಕ್ಯುಸೆಕ್ ಒಳಹರಿವು ಇದೆ.</p>.<p>ಮಡಿಕೇರಿ, ಸೋಮವಾರಪೇಟೆ, ಗರಗಂದೂರು, ಮಾದಾಪುರ ಭಾಗದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಜಲಾಶಯದ ಒಳಹರಿವು ಏರಿಕೆ ಆಗುತ್ತಲೇ ಇದೆ.</p>.<p>ಜಲಾಶಯ ಇನ್ನೂ ಭರ್ತಿಯಾಗಲು 5 ಅಡಿ ಬಾಕಿಯಿರುವಾಗಲೇ ನದಿಗೆ ನೀರು ಬಿಡುಗಡೆ ಮಾಡಲಾಯಿತು.</p>.<p>ಜಿಲ್ಲೆಯ ನಾಪೋಕ್ಲು ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಭಾಗಮಂಡಲದ ತ್ರಿವೇಣಿ ಸಂಗಮವು ಮತ್ತೆ ಭರ್ತಿಯಾಗಿದೆ. ಬಲಮುರಿ ಹಾಗೂ ಬೇತ್ರಿಯಲ್ಲಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಜಿಲ್ಲೆಯ ಜಲಪಾತಗಳು ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿವೆ.</p>.<p>24 ಗಂಟೆಯ ಅವಧಿಯಲ್ಲಿ ನಾಪೋಕ್ಲು 12 ಸೆಂ.ಮೀ, ಸಂಪಾಜೆ 7, ಶಾಂತಳ್ಳಿ 8, ಭಾಗಮಂಡಲ 5.8 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಾವೇರಿ ನದಿಯೂ ಸೇರಿದಂತೆ ಹಳ್ಳ, ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.</p>.<p>ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಲೇ ಇದ್ದು ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ 2,500 ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಯಿತು.</p>.<p>ನದಿಯ ಅಚ್ಚುಕಟ್ಟು ಭಾಗದ ಜನರಿಗೆ ಸೈರನ್ ಹಾಕುವ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಯಿತು. ಕ್ರಸ್ಟ್ಗೇಟ್ ತೆರೆಯುವ ಮೊದಲು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪೂಜೆ ಸಲ್ಲಿಸಿದರು.</p>.<p>ಜಲಾಶಯದ ಗರಿಷ್ಠ ಮಟ್ಟವು 2,859 ಅಡಿಯಾಗಿದ್ದು, ಶುಕ್ರವಾರ ಬೆಳಿಗ್ಗೆಯ ವೇಳೆಗೆ 2,854 ಅಡಿ ನೀರು ಸಂಗ್ರಹವಿತ್ತು. ಜಲಾಶಯಕ್ಕೆ 4,864 ಕ್ಯುಸೆಕ್ ಒಳಹರಿವು ಇದೆ.</p>.<p>ಮಡಿಕೇರಿ, ಸೋಮವಾರಪೇಟೆ, ಗರಗಂದೂರು, ಮಾದಾಪುರ ಭಾಗದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಜಲಾಶಯದ ಒಳಹರಿವು ಏರಿಕೆ ಆಗುತ್ತಲೇ ಇದೆ.</p>.<p>ಜಲಾಶಯ ಇನ್ನೂ ಭರ್ತಿಯಾಗಲು 5 ಅಡಿ ಬಾಕಿಯಿರುವಾಗಲೇ ನದಿಗೆ ನೀರು ಬಿಡುಗಡೆ ಮಾಡಲಾಯಿತು.</p>.<p>ಜಿಲ್ಲೆಯ ನಾಪೋಕ್ಲು ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಭಾಗಮಂಡಲದ ತ್ರಿವೇಣಿ ಸಂಗಮವು ಮತ್ತೆ ಭರ್ತಿಯಾಗಿದೆ. ಬಲಮುರಿ ಹಾಗೂ ಬೇತ್ರಿಯಲ್ಲಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಜಿಲ್ಲೆಯ ಜಲಪಾತಗಳು ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿವೆ.</p>.<p>24 ಗಂಟೆಯ ಅವಧಿಯಲ್ಲಿ ನಾಪೋಕ್ಲು 12 ಸೆಂ.ಮೀ, ಸಂಪಾಜೆ 7, ಶಾಂತಳ್ಳಿ 8, ಭಾಗಮಂಡಲ 5.8 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>