ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈ ಜಗದೀಶ್, ರಾಜೇಂದ್ರ ಸಿಂಗ್ ಬಾಬು ಅವರ ಪುತ್ರಿಯರ ಕಾರು ಅಪಘಾತ: ಅಪಾಯದಿಂದ ಪಾರು

Last Updated 30 ಜುಲೈ 2020, 10:48 IST
ಅಕ್ಷರ ಗಾತ್ರ

ಬೆಂಗಳೂರು: ನಟ ಜೈ ಜಗದೀಶ್ ಅವರ ಪುತ್ರಿ ಅರ್ಪಿತಾ ಹಾಗೂ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಪುತ್ರಿ ರಿಷಿಕಾ ಅವರಿದ್ದ ಕಾರು ಯಲಹಂಕ ಬಳಿ ಬುಧವಾರ ಬೆಳಿಗ್ಗೆ ಅಪಘಾತಕ್ಕೀಡಾಗಿದ್ದು, ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.

ಸಂಬಂಧಿಕರೇ ಆಗಿರುವ ಅರ್ಪಿತಾ ಹಾಗೂ ರಿಷಿಕಾ, ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿದ್ದರು. ಅಲ್ಲಿಂದ ವಾಪಸು ಬರುವಾಗ ಅಪಘಾತವಾಗಿದೆ ಎನ್ನಲಾಗುತ್ತಿದೆ. ಚಾಲಕನಿಗೆ ಗಾಯವಾಗಿದೆ. ಕಾರಿನಲ್ಲಿ ಬೇರೆ ಯಾರಿದ್ದರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

'ಅಪಘಾತದ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಪರಿಚಯಸ್ಥರನ್ನೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ' ಎಂದು ಯಲಹಂಕ ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT