ಈ ವೇಳೆ ಮಾತನಾಡಿದ ಅವರು, 'ಇವತ್ತು ನಾನು ಬೆಂಗಳೂರು ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಸರ್ಕಾರ ನನಗೆ ಹೆಮ್ಮೆಯ ಕೆಲಸ ನೀಡಿದೆ. ಸರ್ಕಾರ ನೀಡಿರುವ ಈ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತೇನೆ. ಬೆಂಗಳೂರು ಪೊಲೀಸರು ಕೋವಿಡ್ ಸಮಯದಲ್ಲಿ ಅದ್ಭುತ ಕಾರ್ಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಲವರು ತಮ್ಮ ಜೀವ ನೀಡಿದ್ದಾರೆ. ಅವರಿಗೆ ಗೌರವ ಸಲ್ಲಿಸುತ್ತೇನೆ' ಎಂದರು.