ವಿಡಿಯೊ ಕಾನ್ಫರೆನ್ಸ್ ಮೂಲಕ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಕನ್ನಡದ ಬಗ್ಗೆಪ್ರೀತಿ, ಗೌರವವಿದ್ದರೆ ಸಾಲದು. ಯೋಜನೆಗಳನ್ನು ಕಾರ್ಯಗತಗೊಳಿಸಲು ಕಾರ್ಯೋನ್ಮುಖರಾಗಬೇಕು. ಆಗಸ್ಟ್ ಅಂತ್ಯದೊಳಗೆ ಕನ್ನಡದ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿ, ಅದನ್ನು ವೃತ್ತಿ ಶಿಕ್ಷಣ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಇಲ್ಲದಿದ್ದರೆ ಪ್ರಾಧಿಕಾರ ತನ್ನ ಮುಂದಿನ ಹಾದಿ ತುಳಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.