ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(78) ಅವರಿಗೆ ಕೋವಿಡ್–19 ಇರುವುದು ಭಾನುವಾರ ದೃಢಪಟ್ಟಿದೆ. ಈ ಬಗ್ಗೆ ಯಡಿಯೂರಪ್ಪ ಅವರ ಸಾಮಾಜಿಕ ಖಾತೆಗಳಲ್ಲಿ ಪ್ರಕಟಿಸಲಾಗಿದೆ.
ಕೊರೊನಾ ಸೋಂಕು ಲಕ್ಷಣಗಳು ಯಡಿಯೂರಪ್ಪ ಅವರಿಗೆ ಕಾಣಿಸಿಕೊಂಡಿಲ್ಲ. ಆದರೆ, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಹೇಳಿದ್ದಾರೆ.
ಯಡಿಯೂರಪ್ಪ ಅವರು ಹಳೆ ವಿಮಾನ ನಿಲ್ದಾಣ ರಸ್ತೆಯ (ಎಚ್ಎಎಲ್) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಡಿಯೂರಪ್ಪ ಅವರ ಕಾರು ಚಾಲಕನಿಗೆ ಹಾಗೂ ಅವರ ಅಡುಗೆ ಸಿಬ್ಬಂದಿಯೊಬ್ಬರಿಗೆ 15 ದಿನಗಳಿಗೆ ಹಿಂದೆ ಕೋವಿಡ್ ದೃಢಪಟ್ಟಿತ್ತು. ಆಗ ಪರೀಕ್ಷೆ ಮಾಡಿಸಿದ್ದಾಗ ಮುಖ್ಯಮಂತ್ರಿಗೆ ಸೋಂಕು ದೃಢಪಟ್ಟಿರಲಿಲ್ಲ.
ಅವರ ಗೃಹ ಕಚೇರಿ ಕಾವೇರಿ ಹಾಗೂ ಡಾಲರ್ಸ್ ಕಾಲೊನಿಯ 'ಧವಳಗಿರಿ' ನಿವಾಸವನ್ನು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ.
'ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ' ಎಂದು ಭಾನುವಾರ ರಾತ್ರಿ ಟ್ವೀಟಿಸಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದ್ದು, ಅವರೂ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಶೀಘ್ರ ಗುಣಮುಖರಾಗುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಪೋಸ್ಟ್ಗಳು ಪ್ರಕಟಣಗೊಳ್ಳುತ್ತಿವೆ.
I wish Shri. B S Yediyurappa a speedy recovery & to return with good health to continue his work for the people.@CMofKarnataka @BSYBJP https://t.co/1Z8yM5WonZ
— Siddaramaiah (@siddaramaiah) August 2, 2020
ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ @BSYBJP ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ.
— Dr Sudhakar K (@mla_sudhakar) August 2, 2020
ಈ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ನವರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು,ರಾಜ್ಯದ ಜನತೆಯ ಆಶೀರ್ವಾದ ನಿಮ್ಮ ಮೇಲಿದೆ,ಅದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ನಾಡಿನ ಜನತೆಯ ಸೇವೆಯಲ್ಲಿ ನಿರತರಾಗಲಿ ಎಂದು ಪ್ರಾರ್ಥಿಸುತ್ತೆನೆ,@BSYBJP#GetWellSoonBSY https://t.co/z2yq0o1qXc
— Shivaram Hebbar (@ShivaramHebbar) August 2, 2020
ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@BSYBJP @CMofKarnataka
— Dr Pushpa Amarnath (@DrPushpaAmarnat) August 2, 2020
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
— GM Siddeshwara (@GMSBJP) August 2, 2020
ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.@BSYBJP @BJP4Karnataka pic.twitter.com/T9zlvbRuFn
ನಮ್ಮೆಲ್ಲರ ನೆಚ್ಚಿನ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಸಮಾನರಾದ ಮಾನ್ಯ ಯಡಿಯೂರಪ್ಪ ರವರು ಅತಿ ಶೀಘ್ರವಾಗಿ ಗುಣಮುಖರಾಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತಮ್ಮದೇಯಾದ ಇನ್ನೂ ಹೆಚ್ಚಿನ ಕೊಡುಗೆ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ @BSYBJP @nalinkateel @BJP4Karnataka @MLA_SatishReddy @SRVishwanathBJP @bjpkrpuram pic.twitter.com/nGm0RPX64x
— N.S Nandiesha Reddy (@NSNandiesha) August 2, 2020
ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ@CMofKarnataka @BSYBJP @KPCCPresident
— Eshwar Khandre (@eshwar_khandre) August 2, 2020
you are a tireless fighter the state has seen @CMofKarnataka Shri @BSYBJP ji.. Pray to god for your speedy recovery https://t.co/GS0EY23gKM
— Pralhad Joshi (@JoshiPralhad) August 2, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.