ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನವರಿಗೆ ಸಾಮಾಜಿಕ ಕಳಕಳಿಗಿಂತ ಪ್ರಚಾರದ ಗೀಳು ಜಾಸ್ತಿ: ಸಚಿವ ಸುಧಾಕರ್

Last Updated 27 ಜುಲೈ 2020, 10:32 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ನಾಯಕರು ಸಾಮಾಜಿಕ ಕಳಕಳಿ ಮರೆತು ವರ್ತಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಪಿಸಿದ್ದು, ಪ್ರತಿಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೋವಿಡ್‌–19 ನಿಯಮಗಳನ್ನು ಗಾಳಿಗೆ ತೂರಿ, ಅಂತರ ಕಾಯ್ದುಕೊಳ್ಳುವುದನ್ನು ಮರೆತು ಕಾಂಗ್ರೆಸ್‌ ಮುಖಂಡರು ಜಾತ್ರೆಯಂತೆ ರಾಜ್ಯಪಾಲರಿಗೆ ದೂರು ನೀಡಲು ಹೋಗಿರುವುದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ. ಇವರಿಗೆ ಸಾಮಾಜಿಕ ಕಳಕಳಿಗಿಂತ ಪ್ರಚಾರದ ಗೀಳು ಜಾಸ್ತಿ. ತಾವು ಇರುವ ಕತ್ತಲೆಯನ್ನು ಅರಿಯದವರು, ಬೆಳಕಿಗಾಗಿ ಎಂದೂ ಹುಡುಕುವುದಿಲ್ಲʼ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರ ಅಕ್ರಮ ಎಸಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು, ತಮ್ಮ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡದ್ದಕ್ಕೆ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT