ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಸರ್ಕಾರಕ್ಕೆ 20 ಪತ್ರಗಳನ್ನು ಬರೆದರೂ ಉತ್ತರ ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಿದ್ದರೆ ಯಾವ ಅಂಕಿ–ಅಂಶಗಳನ್ನು ಇಟ್ಟುಕೊಂಡು ₹4 ಸಾವಿರ ಕೋಟಿ ಖರ್ಚಾಗಿದೆ, ಅದರಲ್ಲಿ ₹2 ಸಾವಿರ ಕೋಟಿ ಅಕ್ರಮ ಆಗಿದೆ ಎನ್ನುವುದಕ್ಕೆ ಆಧಾರಗಳೇನಿವೆ. ದಾಖಲೆಗಳು ಎಲ್ಲಿವೆ ಎಂದು ಪ್ರಶ್ನಿಸಿದ್ದಾರೆ.