ಕೊರೊನಾದಿಂದ ಸಾವಿರಾರು ಜನ ಸೋಂಕಿತರಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗುತ್ತಿಲ್ಲ. ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರು, ನರ್ಸ್ಗಳು, ಆರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್ಗಳು ಸಿಗುತ್ತಿಲ್ಲ. ರೋಗಿಗಳನ್ನು ಸಾಗಿಸಲು ಆಂಬುಲೆನ್ಸ್ಗಳು ಲಭ್ಯವಿಲ್ಲ. ಮೃತಪಟ್ಟ ರೋಗಿಗಳನ್ನು ಗೌರವದಿಂದ ಸಂಸ್ಕಾರ ಮಾಡುವ ವ್ಯವಸ್ಥೆಯೂ ಇಲ್ಲ. ಒಟ್ಟಾರೆ ರಾಜ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಪಾಟೀಲ ದೂರಿನಲ್ಲಿ ತಿಳಿಸಿದ್ದರು.