ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವಳಗಳ ಆದಾಯದಲ್ಲಿ ಗೋಶಾಲೆಗೆ ನೆರವು’- ಕೋಟ ಶ್ರೀನಿವಾಸ ಪೂಜಾರಿ

ಮುಜರಾಯಿ ಸಚಿವ
Last Updated 2 ಆಗಸ್ಟ್ 2020, 22:46 IST
ಅಕ್ಷರ ಗಾತ್ರ

ನೀಲಾವರ(ಬ್ರಹ್ಮಾವರ): ‘ರಾಜ್ಯದ ಎ ಮತ್ತು ಬಿ ಶ್ರೇಣಿಯ ದೇವಸ್ಥಾನಗಳ ವಾರ್ಷಿಕ ಆದಾಯದ ಶೇ 2ರಷ್ಟು ಮೊತ್ತವನ್ನು ಆಯಾ ಜಿಲ್ಲೆಗಳ ನೋಂದಾಯಿತ ಗೋಶಾಲೆಗಳಿಗೆ ನೆರವಿನ ರೂಪದಲ್ಲಿ ನೀಡಲು ಅನುವಾಗುವಂತೆ ಶೀಘ್ರದಲ್ಲಿ ಮುಜರಾಯಿ ಇಲಾಖೆಯಿಂದ ಆದೇಶ ಹೊರಡಿಸಲಾಗುವುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬ್ರಹ್ಮಾವರ ಬಳಿಯ ನೀಲಾವರ ಗೋಶಾಲೆಗೆ ಭಾನುವಾರ ಭೇಟಿ ನೀಡಿದ ಅವರು ಚಾರ್ತುಮಾಸ್ಯ ವ್ರತದಲ್ಲಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ. ಗೋಶಾಲೆಗಳ ನಿರ್ವಹಣೆಯ ಕುರಿತು ಸಮಾಲೋಚನೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

‘ಗೋಶಾಲೆಗಳಿಗೆ ನೆರವು ನೀಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಒಪ್ಪಿಗೆ ಪಡೆದು ಆದೇಶ ಹೊರಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT