ನೀಲಾವರ(ಬ್ರಹ್ಮಾವರ): ‘ರಾಜ್ಯದ ಎ ಮತ್ತು ಬಿ ಶ್ರೇಣಿಯ ದೇವಸ್ಥಾನಗಳ ವಾರ್ಷಿಕ ಆದಾಯದ ಶೇ 2ರಷ್ಟು ಮೊತ್ತವನ್ನು ಆಯಾ ಜಿಲ್ಲೆಗಳ ನೋಂದಾಯಿತ ಗೋಶಾಲೆಗಳಿಗೆ ನೆರವಿನ ರೂಪದಲ್ಲಿ ನೀಡಲು ಅನುವಾಗುವಂತೆ ಶೀಘ್ರದಲ್ಲಿ ಮುಜರಾಯಿ ಇಲಾಖೆಯಿಂದ ಆದೇಶ ಹೊರಡಿಸಲಾಗುವುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.