<p><strong>ಕಲಬುರ್ಗಿ: </strong>ಕೊರೊನಾ ವೈರಸ್ ದೇಶ ಹಾಗೂ ರಾಜ್ಯದಲ್ಲಿ ವ್ಯಾಪಿಸಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಸಲದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಪರಿಣಾಮವಾಗಿ ಒಂದು ಕಡೆ ಸಾರ್ವಜನಿಕರು ಕೂಲಿ ಕಾರ್ಮಿಕರು ಸೇರಿದಂತೆ ಹಲವರು ತೀವ್ರ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದು ಕಡೆ ಸಾವಿರಾರು ಸಂಖ್ಯೆಯ ಸೋಂಕಿತರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಹಾಗಾಗಿ ಈ ಸಲದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.</p>.<p>ಪ್ರತಿವರ್ಷ ಹುಟ್ಟುಹಬ್ಬದ ಸಮಯದಲ್ಲಿ ಬಂದು ನೀವೆಲ್ಲ ಆಶೀರ್ವಾದ ನೀಡಿದ್ದೀರಿ. ಆದರೆ, ಈ ಸಲ ಕೋವಿಡ್ನಿಂದಾಗಿ ಪರಿಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಜುಲೈ 22ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಹಾಗಾಗಿ ಇದೇ ಜುಲೈ 21ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕೂಡ ಈ ಸಲ ನನ್ನ ಹುಟ್ಟುಹಬ್ಬ ಆಚರಿಸದೆ ಸೋಂಕಿತರ ಕುಟುಂಬದವರಿಗೆ ಕೈಲಾದ ಸಹಾಯ ನೀಡಬೇಕೆಂದು ಖರ್ಗೆ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕೊರೊನಾ ವೈರಸ್ ದೇಶ ಹಾಗೂ ರಾಜ್ಯದಲ್ಲಿ ವ್ಯಾಪಿಸಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಸಲದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಪರಿಣಾಮವಾಗಿ ಒಂದು ಕಡೆ ಸಾರ್ವಜನಿಕರು ಕೂಲಿ ಕಾರ್ಮಿಕರು ಸೇರಿದಂತೆ ಹಲವರು ತೀವ್ರ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದು ಕಡೆ ಸಾವಿರಾರು ಸಂಖ್ಯೆಯ ಸೋಂಕಿತರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಹಾಗಾಗಿ ಈ ಸಲದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.</p>.<p>ಪ್ರತಿವರ್ಷ ಹುಟ್ಟುಹಬ್ಬದ ಸಮಯದಲ್ಲಿ ಬಂದು ನೀವೆಲ್ಲ ಆಶೀರ್ವಾದ ನೀಡಿದ್ದೀರಿ. ಆದರೆ, ಈ ಸಲ ಕೋವಿಡ್ನಿಂದಾಗಿ ಪರಿಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಜುಲೈ 22ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಹಾಗಾಗಿ ಇದೇ ಜುಲೈ 21ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕೂಡ ಈ ಸಲ ನನ್ನ ಹುಟ್ಟುಹಬ್ಬ ಆಚರಿಸದೆ ಸೋಂಕಿತರ ಕುಟುಂಬದವರಿಗೆ ಕೈಲಾದ ಸಹಾಯ ನೀಡಬೇಕೆಂದು ಖರ್ಗೆ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>