ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕಾರ್ಯಪಡೆಯಲ್ಲಿ ಕಡೆಗಣನೆ | ಸಚಿವ ಬಿ.ಶ್ರೀರಾಮುಲು ಅಸಮಾಧಾನ

Last Updated 23 ಜುಲೈ 2020, 20:11 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಕಾರ್ಯಪಡೆಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಸಮಾಧಾನಗೊಂಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಳಲು ತೋಡಿಕೊಂಡರು ಎಂದು ಮೂಲಗಳು ತಿಳಿಸಿವೆ.

ಕಾರ್ಯಪಡೆ ಸಭೆಗಳಲ್ಲಿ ತಮ್ಮ ಮಾತುಗಳಿಗೆ ಅಧಿಕಾರಿಗಳೂ ಬೆಲೆ ನೀಡುತ್ತಿಲ್ಲ. ಎರಡನೇ ಬಾರಿ ಆರೋಗ್ಯ ಸಚಿವನಾಗಿ ಖಾತೆಯನ್ನು ನಿರ್ವಹಿಸುತ್ತಿರುವ ತಮ್ಮನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ ಎಂಬ ಬೇಗುದಿಯನ್ನು ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕಾರ್ಯಪಡೆ ಸಭೆಯಲ್ಲಿ ಬೇಸರಗೊಂಡು ಸಭೆಯಿಂದ ಅರ್ಧಕ್ಕೆ ಹೊರಹೋದರು ಎಂದು ಹೇಳಲಾಗಿದ್ದು, ಈ ಕುರಿತ ಪ್ರತಿಕ್ರಿಯೆಗೆ ಶ್ರೀರಾಮುಲು ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT