ಬೆಂಗಳೂರು: ಕೊರೊನಾ ಸೋಂಕಿತರೊಬ್ಬರಿಗೆ ₹5 ಲಕ್ಷ ಬಿಲ್ ಮಾಡಿರುವ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೆಂಗಳೂರಿನ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ಎಚ್ಚರಿಕೆ ಕೊಟ್ಟಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ ₹5 ಲಕ್ಷ ಬಿಲ್ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಗಿದೆ’ ಎಂದು ತಿಳಿಸಿದ್ದಾರೆ.