ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಹಿರಿಯ ಶಾಸಕನಿದ್ದೇನೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂಬುದುರಲ್ಲಿ ಯಾವುದೇ ಅನುಮಾನ ಇಲ್ಲ. ಮತ್ತೊಮ್ಮೆ ಸಂಪುಟ ಪುನರ್ ರಚನೆ ಕಸರತ್ತು ಆರಂಭವಾಗಿದೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇನೆ. ಹೈಕಮಾಂಡ್ ಮೇಲೆ ವಿಶ್ವಾಸವಿದೆ’ ಎಂದು ರಂಜನ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.