<p><strong>ಹಾವೇರಿ:</strong> ‘ಕೋವಿಡ್ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರದ ಆರೋಪ ಮಾಡಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಲೀಗಲ್ ನೋಟಿಸ್ ನೀಡಿರುವುದು ಕಳ್ಳರೇ ಪೊಲೀಸರಿಗೆ ನೋಟಿಸ್ ಕೊಟ್ಟಂತೆ’ ಎಂದು ಶಾಸಕ ಎಂ.ಬಿ.ಪಾಟೀಲ ಲೇವಡಿ ಮಾಡಿದರು.</p>.<p>ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿರುವುದು ಬಿಜೆಪಿ ಸರ್ಕಾರದ ಸಂಸ್ಕಾರವಾಗಿದೆ. ಈ ಅವ್ಯವಹಾರದಲ್ಲಿ ಮುಖ್ಯಮಂತ್ರಿ, ಸಚಿವರು, ಅಧಿಕಾರಿಗಳು ಎಲ್ಲರೂ ಶಾಮೀಲಾಗಿದ್ದಾರೆ. ತಪ್ಪು ಮಾಡಿಲ್ಲ ಎಂಬ ವಿಶ್ವಾಸವಿದ್ದರೆ ತನಿಖೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ರಿಸರ್ವ್ ಬ್ಯಾಂಕ್ನಿಂದ ₹8 ಸಾವಿರ ಕೋಟಿ ಸಾಲ ಮಾಡುವ ಮೂಲಕ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ. ₹2 ಸಾವಿರ ಕೋಟಿಗೂ ಅಧಿಕ ಹಣವನ್ನು ಲೂಟಿ ಹೊಡೆದು, ರಾಜ್ಯದ ಘನತೆಯನ್ನು ಮಣ್ಣಪಾಲು ಮಾಡಿದ್ದಾರೆ. ನನಗೂ ಬೇಕಾದರೆ ನೋಟಿಸ್ ಕೊಡಲಿ. ತಕ್ಕ ಉತ್ತರ ಕೊಡುತ್ತೇನೆ’ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಕೋವಿಡ್ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರದ ಆರೋಪ ಮಾಡಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಲೀಗಲ್ ನೋಟಿಸ್ ನೀಡಿರುವುದು ಕಳ್ಳರೇ ಪೊಲೀಸರಿಗೆ ನೋಟಿಸ್ ಕೊಟ್ಟಂತೆ’ ಎಂದು ಶಾಸಕ ಎಂ.ಬಿ.ಪಾಟೀಲ ಲೇವಡಿ ಮಾಡಿದರು.</p>.<p>ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿರುವುದು ಬಿಜೆಪಿ ಸರ್ಕಾರದ ಸಂಸ್ಕಾರವಾಗಿದೆ. ಈ ಅವ್ಯವಹಾರದಲ್ಲಿ ಮುಖ್ಯಮಂತ್ರಿ, ಸಚಿವರು, ಅಧಿಕಾರಿಗಳು ಎಲ್ಲರೂ ಶಾಮೀಲಾಗಿದ್ದಾರೆ. ತಪ್ಪು ಮಾಡಿಲ್ಲ ಎಂಬ ವಿಶ್ವಾಸವಿದ್ದರೆ ತನಿಖೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ರಿಸರ್ವ್ ಬ್ಯಾಂಕ್ನಿಂದ ₹8 ಸಾವಿರ ಕೋಟಿ ಸಾಲ ಮಾಡುವ ಮೂಲಕ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ. ₹2 ಸಾವಿರ ಕೋಟಿಗೂ ಅಧಿಕ ಹಣವನ್ನು ಲೂಟಿ ಹೊಡೆದು, ರಾಜ್ಯದ ಘನತೆಯನ್ನು ಮಣ್ಣಪಾಲು ಮಾಡಿದ್ದಾರೆ. ನನಗೂ ಬೇಕಾದರೆ ನೋಟಿಸ್ ಕೊಡಲಿ. ತಕ್ಕ ಉತ್ತರ ಕೊಡುತ್ತೇನೆ’ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>