ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಕೆಳದಂಡೆ ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯ ಭರ್ತಿಯಾಗಿದ್ದರಿಂದ ಹೆಚ್ಚುವರಿ ನೀರು ನದಿಗೆ ಬಿಡಲಾಗಿದೆ. ಇದರಿಂದ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಚಿಮ್ಮನಚೋಡ ಗ್ರಾಮದ ಭೋವಿ ಬಡಾವಣೆಯಲ್ಲಿ 25, ಕನಕಪುರದಲ್ಲಿ 10 ಮನೆಗಳಿಗೆ ನೀರು ನುಗ್ಗಿದೆ.