‘ಕನ್ನಡಿಗರಿಗೆ ಮೀಸಲಾತಿ ನೀಡುವ ವೇಳೆ ಕನ್ನಡಿಗರು ಎಂದರೆ ಯಾರು ಎಂಬುದನ್ನು ವ್ಯಾಖ್ಯಾನಿಸಬೇಕಾಗುತ್ತದೆ. ಕನ್ನಡ ಮಾಧ್ಯಮದಲ್ಲಿ ಓದಿದವರೇ, ಕನ್ನಡ ಮಾತನಾಡುವವರೇ ಅಥವಾ ಕರ್ನಾಟಕದಲ್ಲಿ ವಾಸಿಸುವವರು ಕನ್ನಡಿಗರೇ ಎಂಬುದನ್ನು ತಿಳಿಸಬೇಕು. ಆದರೆ, ಹೀಗೆ ವಾಸಸ್ಥಳ ಅಥವಾ ಪ್ರದೇಶಕ್ಕೆ ಸಂಬಂಧಿಸಿದಂತೆ ಮೀಸಲಾತಿ ಅನ್ವಯಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ. ಇದು ಸಂಸತ್ತಿನ ಕೆಲಸ. ಈ ಕುರಿತು ಕಾನೂನು ರೂಪಿಸುವುದು ತುಂಬಾ ಸೂಕ್ಷ್ಮ ಮತ್ತು ಸಂಕೀರ್ಣ ಕಾರ್ಯ’ ಎಂದೂ ಅವರು ಹೇಳಿದರು.