ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾನ್ಯ ಪ್ರವೇಶ ಪರೀಕ್ಷೆಗೆ ತಡೆ ಇಲ್ಲ: ಮಧ್ಯಂತರ ಮನವಿ ತಿರಸ್ಕರಿಸಿದ ಹೈಕೋರ್ಟ್

Last Updated 29 ಜುಲೈ 2020, 14:29 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮುಂದೂಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ನಿಗದಿಯಂತೆ ಜುಲೈ 30 ಮತ್ತು 31ರಂದು ಪರೀಕ್ಷೆ ನಡೆಯಲಿದೆ.

‘ಕೋವಿಡ್ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಬೇಕು. ಕಂಟೈನ್‌ಮೆಂಟ್ ವಲಯದ ವಿದ್ಯಾರ್ಥಿಗಳು ಮತ್ತು ಪೋಷಕರು ಅಲ್ಲಿಂದ ಹೊರ ಹೋಗಲು ಅವಕಾಶ ನೀಡಬೇಕು. ಪರೀಕ್ಷೆ ಬರೆಯಲು ಇಚ್ಚಿಸುವ ಯಾವೊಬ್ಬ ವಿದ್ಯಾರ್ಥಿಗೂ ಅವಕಾಶ ಸಿಗದಂತೆ ಆಗಬಾರದು’ ಎಂದು ನ್ಯಾಯಮೂರ್ತಿ ಅರವಿಂದಕುಮಾರ್ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT