<p><strong>ಬೆಂಗಳೂರು:</strong>ಲಾಕ್ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.</p>.<p>ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ವಹಿಸಿರುವ ಸಚಿವರ ಸಭೆ ನಡೆಸಿದ ಅವರು,ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.</p>.<p>ಖಾಸಗಿ ಆಸ್ಪತ್ರೆಗಳಿಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ಕೋವಿಡೇತರ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿ ಪಡಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.</p>.<p>ರೋಗಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೇ, ಕೋವಿಡ್ ಕೇರ್ ಸೆಂಟರ್ಗಳಿಗೆ ಅಥವಾ ಹೋಂ ಕ್ವಾರಂಟೈನ್ಗೆ ಒಳಪಡಿಸಬೇಕು. ಈ ಮೂಲಕ ತೀವ್ರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆಯೂ ಅವರು ಸೂಚಿಸಿದರು.</p>.<p>ಆಸ್ಪತ್ರೆಗಳಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಬೇಕು. ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮವಹಿಸಬೇಕು. ಮನೆಗಳಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಿ ಮೃತ ದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.</p>.<p>ವೈದ್ಯರ ಕೊರತೆ ನಿವಾರಿಸಲು ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಮತ್ತು ಆಂಬುಲೆನ್ಸ್ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೇ ಇದ್ದರೆ ಕಠಿಣ ಕ್ರಮಕೈಗೊಳ್ಳಬೇಕು ಎಂದರು.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.</p>.<p>ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳು ಹಾಗು ವಸತಿ ಗೃಹಗಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆಯೂ ಸೂಚಿಸಿದರು.</p>.<p><strong>ಪ್ರಮುಖ ಅಂಶಗಳು</strong></p>.<p>–ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ನಿರ್ದೇಶನ</p>.<p>–ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.</p>.<p>–ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ, ಅಂಬ್ಯುಲೆನ್ಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ಈ ವ್ಯವಸ್ಥೆಯನ್ನು ವೀಕೇಂದ್ರೀಕರಿಸಿ, ವಲಯವಾರು, ಮೇಲ್ವಿಚಾರಣೆ ನಡೆಸಬೇಕು.</p>.<p>–ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಲಾಕ್ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.</p>.<p>ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ವಹಿಸಿರುವ ಸಚಿವರ ಸಭೆ ನಡೆಸಿದ ಅವರು,ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.</p>.<p>ಖಾಸಗಿ ಆಸ್ಪತ್ರೆಗಳಿಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ಕೋವಿಡೇತರ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿ ಪಡಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.</p>.<p>ರೋಗಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೇ, ಕೋವಿಡ್ ಕೇರ್ ಸೆಂಟರ್ಗಳಿಗೆ ಅಥವಾ ಹೋಂ ಕ್ವಾರಂಟೈನ್ಗೆ ಒಳಪಡಿಸಬೇಕು. ಈ ಮೂಲಕ ತೀವ್ರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆಯೂ ಅವರು ಸೂಚಿಸಿದರು.</p>.<p>ಆಸ್ಪತ್ರೆಗಳಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಬೇಕು. ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮವಹಿಸಬೇಕು. ಮನೆಗಳಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಿ ಮೃತ ದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.</p>.<p>ವೈದ್ಯರ ಕೊರತೆ ನಿವಾರಿಸಲು ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಮತ್ತು ಆಂಬುಲೆನ್ಸ್ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೇ ಇದ್ದರೆ ಕಠಿಣ ಕ್ರಮಕೈಗೊಳ್ಳಬೇಕು ಎಂದರು.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.</p>.<p>ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳು ಹಾಗು ವಸತಿ ಗೃಹಗಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆಯೂ ಸೂಚಿಸಿದರು.</p>.<p><strong>ಪ್ರಮುಖ ಅಂಶಗಳು</strong></p>.<p>–ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ನಿರ್ದೇಶನ</p>.<p>–ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.</p>.<p>–ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ, ಅಂಬ್ಯುಲೆನ್ಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ಈ ವ್ಯವಸ್ಥೆಯನ್ನು ವೀಕೇಂದ್ರೀಕರಿಸಿ, ವಲಯವಾರು, ಮೇಲ್ವಿಚಾರಣೆ ನಡೆಸಬೇಕು.</p>.<p>–ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>