ಮಾಧ್ಯಮ ಪ್ರತಿನಿಧಿಗಳ ಜೊತೆ ಶನಿವಾರ ಮಾತನಾಡಿದ ಅವರು, ‘ಆಂಬುಲೆನ್ಸ್ ಇಲ್ಲದೆ ಸೋಂಕಿತರು ಎರಡು ದಿನ ನರಳಾಡಿ ಸಾವಿಗೀಡಾದ ಘಟನೆಗಳು ನಡೆದಿವೆ. ಅಂತ್ಯಸಂಸ್ಕಾರದಲ್ಲೂ ಸರಿಯಾಗಿ ನಡೆದುಕೊಂಡಿಲ್ಲ. ಶವಗಳನ್ನು ಮನಸ್ಸಿಗೆ ಬಂದಂತೆ ಎಸೆದಿದ್ದಾರೆ. ಇದೆಲ್ಲವೂ ಮಾನವ ಹಕ್ಕುಗಳ ಉಲ್ಲಂಘನೆ. ಹೀಗಾಗಿ, ಆಯೋಗ ದೂರು ದಾಖಲು ಮಾಡಿಕೊಂಡಿದೆ’ ಎಂದರು.