<p><strong>ಬಂಟ್ವಾಳ</strong>: ಇಲ್ಲಿನ ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಬ್ಬರು ಕಳೆದ 27 ವರ್ಷದಿಂದ ಬೋಧಿಸಿದ ವಿಷಯದ ವಿದ್ಯಾರ್ಥಿಗಳೆಲ್ಲರೂ ತೇರ್ಗಡೆ ಹೊಂದಿದ್ದಾರೆ.</p>.<p>1992ರಲ್ಲಿ ಮುಹಿಯುದ್ದೀನ್ ಎಜ್ಯುಕೇಶನಲ್ ಟ್ರಸ್ಟ್ ಮೂಲಕ ಆರಂಭಿಸಿದ ತುಂಬೆ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಮತ್ತು ಲೆಕ್ಕಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರದ ಉಪನ್ಯಾಸಕಿ ಕವಿತಾ ಈ ಸಾಧನೆ ಮಾಡಿದ್ದಾರೆ.</p>.<p>ಕಳೆದ 27 ವರ್ಷಗಳಿಂದ ಇವರಿಬ್ಬರು ಬೋಧಿಸುವ ವಿಷಯದಲ್ಲಿ ಯಾವುದೇ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿಲ್ಲ.</p>.<p>‘ಪ್ರತೀ ವರ್ಷ ನವೆಂಬರ್ ಅಥವಾ ಡಿಸೆಂಬರ್ ತಿಂಗಳ ಒಳಗೆ ಎಲ್ಲ ಪಾಠ ಮುಗಿಸಿದ ಬಳಿಕ ಮತ್ತೆ ಪುನರಾವರ್ತನೆ ನಡೆಸುತ್ತೇವೆ. ಇದೇ ವೇಳೆ ಮೂರು ತಿಂಗಳು ಮೂರು ಪೂರ್ವ ಸಿದ್ಧತಾ ಪರೀಕ್ಷೆ, ಈ ನಡುವೆ ಕಿರು ಪರೀಕ್ಷೆ ನಡೆಸಿ ಎಲ್ಲಾ ವಿದ್ಯಾರ್ಥಿಗಳನ್ನು ಸಮಾನವಾಗಿ ಕಂಡು, ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡುತ್ತೇವೆ’ ಎಂದು ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಪ್ರತಿಕ್ರಿಯಿಸಿದ್ದಾರೆ.</p>.<p>‘ಅಂದಿನ ಪಾಠವನ್ನು ಅಂದೇ ಮನೆಯಲ್ಲಿ ಅಭ್ಯಾಸ ಮಾಡುವುದರ ಜೊತೆಗೆ ಅರ್ಥವಾಗದ ವಿಚಾರವನ್ನು ಮೊಬೈಲ್ ಮೂಲಕ ನಮಗೆ ಕರೆ ಮಾಡಿ ತಿಳಿದುಕೊಳ್ಳಲು ವಿದ್ಯಾರ್ಥಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ’ ಎನ್ನುತ್ತಾರೆ ಉಪನ್ಯಾಸಕಿ ಕವಿತಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಇಲ್ಲಿನ ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಬ್ಬರು ಕಳೆದ 27 ವರ್ಷದಿಂದ ಬೋಧಿಸಿದ ವಿಷಯದ ವಿದ್ಯಾರ್ಥಿಗಳೆಲ್ಲರೂ ತೇರ್ಗಡೆ ಹೊಂದಿದ್ದಾರೆ.</p>.<p>1992ರಲ್ಲಿ ಮುಹಿಯುದ್ದೀನ್ ಎಜ್ಯುಕೇಶನಲ್ ಟ್ರಸ್ಟ್ ಮೂಲಕ ಆರಂಭಿಸಿದ ತುಂಬೆ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಮತ್ತು ಲೆಕ್ಕಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರದ ಉಪನ್ಯಾಸಕಿ ಕವಿತಾ ಈ ಸಾಧನೆ ಮಾಡಿದ್ದಾರೆ.</p>.<p>ಕಳೆದ 27 ವರ್ಷಗಳಿಂದ ಇವರಿಬ್ಬರು ಬೋಧಿಸುವ ವಿಷಯದಲ್ಲಿ ಯಾವುದೇ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿಲ್ಲ.</p>.<p>‘ಪ್ರತೀ ವರ್ಷ ನವೆಂಬರ್ ಅಥವಾ ಡಿಸೆಂಬರ್ ತಿಂಗಳ ಒಳಗೆ ಎಲ್ಲ ಪಾಠ ಮುಗಿಸಿದ ಬಳಿಕ ಮತ್ತೆ ಪುನರಾವರ್ತನೆ ನಡೆಸುತ್ತೇವೆ. ಇದೇ ವೇಳೆ ಮೂರು ತಿಂಗಳು ಮೂರು ಪೂರ್ವ ಸಿದ್ಧತಾ ಪರೀಕ್ಷೆ, ಈ ನಡುವೆ ಕಿರು ಪರೀಕ್ಷೆ ನಡೆಸಿ ಎಲ್ಲಾ ವಿದ್ಯಾರ್ಥಿಗಳನ್ನು ಸಮಾನವಾಗಿ ಕಂಡು, ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡುತ್ತೇವೆ’ ಎಂದು ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಪ್ರತಿಕ್ರಿಯಿಸಿದ್ದಾರೆ.</p>.<p>‘ಅಂದಿನ ಪಾಠವನ್ನು ಅಂದೇ ಮನೆಯಲ್ಲಿ ಅಭ್ಯಾಸ ಮಾಡುವುದರ ಜೊತೆಗೆ ಅರ್ಥವಾಗದ ವಿಚಾರವನ್ನು ಮೊಬೈಲ್ ಮೂಲಕ ನಮಗೆ ಕರೆ ಮಾಡಿ ತಿಳಿದುಕೊಳ್ಳಲು ವಿದ್ಯಾರ್ಥಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ’ ಎನ್ನುತ್ತಾರೆ ಉಪನ್ಯಾಸಕಿ ಕವಿತಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>