‘ಪ್ರತೀ ವರ್ಷ ನವೆಂಬರ್ ಅಥವಾ ಡಿಸೆಂಬರ್ ತಿಂಗಳ ಒಳಗೆ ಎಲ್ಲ ಪಾಠ ಮುಗಿಸಿದ ಬಳಿಕ ಮತ್ತೆ ಪುನರಾವರ್ತನೆ ನಡೆಸುತ್ತೇವೆ. ಇದೇ ವೇಳೆ ಮೂರು ತಿಂಗಳು ಮೂರು ಪೂರ್ವ ಸಿದ್ಧತಾ ಪರೀಕ್ಷೆ, ಈ ನಡುವೆ ಕಿರು ಪರೀಕ್ಷೆ ನಡೆಸಿ ಎಲ್ಲಾ ವಿದ್ಯಾರ್ಥಿಗಳನ್ನು ಸಮಾನವಾಗಿ ಕಂಡು, ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡುತ್ತೇವೆ’ ಎಂದು ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಪ್ರತಿಕ್ರಿಯಿಸಿದ್ದಾರೆ.