<p><strong>ಬೆಂಗಳೂರು</strong>: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಇದರ ಬೆನ್ನಲ್ಲೇ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬಾಗಲೂರು ಠಾಣೆ ವ್ಯಾಪ್ತಿಯ ವಿನಾಯಕನಗರ ನಿವಾಸಿ ರಾಹುಲ್ ರೆಡ್ಡಿ (21) ಹಾಗೂ ಬಾಬಾನಗರ ನಿವಾಸಿ ಪ್ರವೀಣ್ (19) ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳು. ಈ ಕುರಿತು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>‘ವಿದ್ಯಾರ್ಥಿ ರಾಹುಲ್ ರೆಡ್ಡಿ, ಪೋಷಕರ ಜೊತೆ ವಾಸವಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದಿದ್ದರು ಎನ್ನಲಾಗಿದೆ. ಬೆಳಿಗ್ಗೆ 11.30ರ ಸುಮಾರಿಗೆ ಮನೆಯ ಕೊಠಡಿಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಬಾಗಲೂರು ಪೊಲೀಸರು ಹೇಳಿದರು.</p>.<p class="Subhead"><strong>ಅನುತ್ತೀರ್ಣಗೊಂಡಿದ್ದ ಪ್ರವೀಣ್: ‘</strong>ಬಾಬಾನಗರ ನಿವಾಸಿ ಪ್ರವೀಣ್, ದ್ವಿತೀಯ ಪಿಯು ಪರೀಕ್ಷೆಯ ಕೆಲ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಅದರಿಂದ ಅವರು ನೊಂದಿದ್ದರೆಂದು ಗೊತ್ತಾಗಿದೆ. ಅದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಎರಡೂ ಪ್ರಕರಣದಲ್ಲೂ ಪೋಷಕರ ಹೇಳಿಕೆ ಪಡೆಯಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಟಲಿನ ದ್ರವವನ್ನು ಸಂಗ್ರಹಿಸಿರುವ ವೈದ್ಯರು, ಕೊರೊನಾ ವೈರಾಣು ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಅದರ ವರದಿ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಇದರ ಬೆನ್ನಲ್ಲೇ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬಾಗಲೂರು ಠಾಣೆ ವ್ಯಾಪ್ತಿಯ ವಿನಾಯಕನಗರ ನಿವಾಸಿ ರಾಹುಲ್ ರೆಡ್ಡಿ (21) ಹಾಗೂ ಬಾಬಾನಗರ ನಿವಾಸಿ ಪ್ರವೀಣ್ (19) ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳು. ಈ ಕುರಿತು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>‘ವಿದ್ಯಾರ್ಥಿ ರಾಹುಲ್ ರೆಡ್ಡಿ, ಪೋಷಕರ ಜೊತೆ ವಾಸವಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದಿದ್ದರು ಎನ್ನಲಾಗಿದೆ. ಬೆಳಿಗ್ಗೆ 11.30ರ ಸುಮಾರಿಗೆ ಮನೆಯ ಕೊಠಡಿಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಬಾಗಲೂರು ಪೊಲೀಸರು ಹೇಳಿದರು.</p>.<p class="Subhead"><strong>ಅನುತ್ತೀರ್ಣಗೊಂಡಿದ್ದ ಪ್ರವೀಣ್: ‘</strong>ಬಾಬಾನಗರ ನಿವಾಸಿ ಪ್ರವೀಣ್, ದ್ವಿತೀಯ ಪಿಯು ಪರೀಕ್ಷೆಯ ಕೆಲ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಅದರಿಂದ ಅವರು ನೊಂದಿದ್ದರೆಂದು ಗೊತ್ತಾಗಿದೆ. ಅದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಎರಡೂ ಪ್ರಕರಣದಲ್ಲೂ ಪೋಷಕರ ಹೇಳಿಕೆ ಪಡೆಯಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಟಲಿನ ದ್ರವವನ್ನು ಸಂಗ್ರಹಿಸಿರುವ ವೈದ್ಯರು, ಕೊರೊನಾ ವೈರಾಣು ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಅದರ ವರದಿ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>