ಎರಡನೇ ದಿನವಾದ ಸೋಮವಾರ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮೀಜಿ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ಮಠದ ಪ್ರಾಕಾರದಲ್ಲಿ ದವಸ ಧಾನ್ಯ ಪೂಜೆ ನೆರವೇರಿಸಲಾಯಿತು. ಶ್ರೀಮೂಲರಾಮದೇವರ ಪೂಜೆ ಹಾಗೂ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆಯನ್ನು ಶ್ರೀಸುಬುಧೇಂದ್ರ ತೀರ್ಥರು ನೆರವೇರಿಸಿದರು.