<p><strong>ಬೆಂಗಳೂರು:</strong> ಕರಾವಳಿ ಜಿಲ್ಲೆಗಳು, ಕೊಡಗು, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ವಿಜಯಪುರದಲ್ಲಿ ಡೋಣಿ ನದಿ ಮೈದುಂಬಿಕೊಂಡಿದ್ದು, ಸೇತುವೆಯೊಂದು ಜಲಾವೃತವಾಗಿದೆ. ಗೋಕರ್ಣದ ತಗ್ಗುಪ್ರದೇಶಗಳಲ್ಲಿ ನೀರು ನಿಂತು, ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಕರಾವಳಿಯಲ್ಲಿ ಶುಕ್ರವಾರ ಮಳೆ ಬಿರುಸಾಗಿದ್ದು, ಮಲೆನಾಡಿನಲ್ಲಿ ತುಂತುರು ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಮಿತ್ತಕೋಡಿ ಬಳಿ ರಸ್ತೆ ಬದಿಯಲ್ಲಿದ್ದ ಗುಡ್ಡ ಕುಸಿದಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.</p>.<p>ಉಡುಪಿ ಜಿಲ್ಲೆಯ ಹೆಬ್ರಿ, ಬೈಂದೂರು, ಹಿರಿಯಡಕದಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗಿರಿ ಶ್ರೇಣಿ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಕಳಸ ಭಾಗದಲ್ಲಿ ದಿನವಿಡೀ ಸಾಧಾರಣ ಮಳೆಯಾಗಿದೆ.</p>.<p>ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.ಗೋಕರ್ಣದ ರಥಬೀದಿಯಲ್ಲಿ ಮೂರು ಅಡಿಗಿಂತ ಹೆಚ್ಚು ನೀರು ನಿಂತಿತ್ತು. ರುದ್ರಪಾದ, ಬಿಜ್ಜೂರು ಕಡೆ ಮನೆಗಳು ಜಲಾವೃತವಾದವು. ಹೊನ್ನಾವರ, ಕುಮಟಾ, ಶಿರಸಿಯಲ್ಲಿ ದಿನವಿಡೀ ಆಗಾಗ ಮಳೆಯಾಗಿದೆ.</p>.<p>ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ, ಗದಗದ ಡಂಬಳದಲ್ಲಿ ಕೆಲಕಾಲ ಮಳೆಯಾಗಿದೆ. ತಾಳಿಕೋಟೆಯ ಡೋಣಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಡೋಣಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹಡಗಿ<br />ನಾಳ ಮಾರ್ಗದಲ್ಲಿ ಸೇತುವೆ ಜಲಾವೃತವಾಗಿದೆ ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ನಿರಂತರ ಮಳೆಯಾಗಿದೆ. ನಾಪೋಕ್ಲು, ಭಾಗಮಂಡಲ, ತಲ<br />ಕಾವೇರಿ, ಚೇರಂಬಾಣೆ, ಪೊನ್ನಂಪೇಟೆ, ಶ್ರೀಮಂಗಲ, ಕರಿಕೆ ವ್ಯಾಪ್ತಿಯಲ್ಲಿ ಜೋರು ಮಳೆಯಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರಾವಳಿ ಜಿಲ್ಲೆಗಳು, ಕೊಡಗು, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ವಿಜಯಪುರದಲ್ಲಿ ಡೋಣಿ ನದಿ ಮೈದುಂಬಿಕೊಂಡಿದ್ದು, ಸೇತುವೆಯೊಂದು ಜಲಾವೃತವಾಗಿದೆ. ಗೋಕರ್ಣದ ತಗ್ಗುಪ್ರದೇಶಗಳಲ್ಲಿ ನೀರು ನಿಂತು, ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಕರಾವಳಿಯಲ್ಲಿ ಶುಕ್ರವಾರ ಮಳೆ ಬಿರುಸಾಗಿದ್ದು, ಮಲೆನಾಡಿನಲ್ಲಿ ತುಂತುರು ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಮಿತ್ತಕೋಡಿ ಬಳಿ ರಸ್ತೆ ಬದಿಯಲ್ಲಿದ್ದ ಗುಡ್ಡ ಕುಸಿದಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.</p>.<p>ಉಡುಪಿ ಜಿಲ್ಲೆಯ ಹೆಬ್ರಿ, ಬೈಂದೂರು, ಹಿರಿಯಡಕದಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗಿರಿ ಶ್ರೇಣಿ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಕಳಸ ಭಾಗದಲ್ಲಿ ದಿನವಿಡೀ ಸಾಧಾರಣ ಮಳೆಯಾಗಿದೆ.</p>.<p>ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.ಗೋಕರ್ಣದ ರಥಬೀದಿಯಲ್ಲಿ ಮೂರು ಅಡಿಗಿಂತ ಹೆಚ್ಚು ನೀರು ನಿಂತಿತ್ತು. ರುದ್ರಪಾದ, ಬಿಜ್ಜೂರು ಕಡೆ ಮನೆಗಳು ಜಲಾವೃತವಾದವು. ಹೊನ್ನಾವರ, ಕುಮಟಾ, ಶಿರಸಿಯಲ್ಲಿ ದಿನವಿಡೀ ಆಗಾಗ ಮಳೆಯಾಗಿದೆ.</p>.<p>ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ, ಗದಗದ ಡಂಬಳದಲ್ಲಿ ಕೆಲಕಾಲ ಮಳೆಯಾಗಿದೆ. ತಾಳಿಕೋಟೆಯ ಡೋಣಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಡೋಣಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹಡಗಿ<br />ನಾಳ ಮಾರ್ಗದಲ್ಲಿ ಸೇತುವೆ ಜಲಾವೃತವಾಗಿದೆ ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ನಿರಂತರ ಮಳೆಯಾಗಿದೆ. ನಾಪೋಕ್ಲು, ಭಾಗಮಂಡಲ, ತಲ<br />ಕಾವೇರಿ, ಚೇರಂಬಾಣೆ, ಪೊನ್ನಂಪೇಟೆ, ಶ್ರೀಮಂಗಲ, ಕರಿಕೆ ವ್ಯಾಪ್ತಿಯಲ್ಲಿ ಜೋರು ಮಳೆಯಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>