ಈ ಬಗ್ಗೆ ರಾಜ್ಯದ ಎಲ್ಲ ಕಮಿಷನರ್ಗಳು ಹಾಗೂ ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ಕುಮಾರ್ ಪಾಂಡೆ, ‘ಭೂಮಿ ಪೂಜೆ ಅಂಗವಾಗಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಪೂಜೆ ನಡೆಸಲು ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನೋಡಿಕೊಳ್ಳಬೇಕು’ ಎಂದಿದ್ದಾರೆ.