ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಶ್ರೀಗಳು, ಮಂದಿರ ನಿರ್ಮಾಣಕ್ಕೆ ಬೇಕಾಗುವ ಹಣವನ್ನು ಕಂಪೆನಿಗಳ ಸಿಎಸ್ಆರ್ ನಿಧಿಯಿಂದ ಪಡೆದುಕೊಳ್ಳುವುದು ಹಾಗೂ ಒಬ್ಬ ವ್ಯಕ್ತಿಯಿಂದ ಕನಿಷ್ಠ ₹ 10, ಮನೆಯಿಂದ ₹ 100 ಸಂಗ್ರಹಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ನ.25 ರಿಂದ ಡಿ. 25ರವರೆಗೆ ವ್ಯಾಪಕ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದರು.