ಬೆಂಗಳೂರು: ಜುಲೈ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸಿದ್ಧ ಇರುವುದಾಗಿ ಹೈಕೋರ್ಟ್ಗೆ ತಿಳಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಆರೋಗ್ಯ, ಸಾರಿಗೆ, ಪೊಲೀಸ್ ಅಧಿಕಾರಿಗಳ ಜತೆಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತುರ್ತು ವಿಡಿಯೊ ಸಂವಾದ ನಡೆಸಿದರು.
‘ಸಿದ್ಧತೆ ಪರಿಶೀಲಿಸಲಾಗಿದೆ. ಬುಧವಾರ ಈ ವಿಷಯವನ್ನು ಹೈಕೋರ್ಟ್ ಗಮನಕ್ಕೆ ತರಲಾಗುವುದು. ಅಂತಿಮವಾಗಿ ಹೈಕೋರ್ಟ್ ಸೂಚನೆ ಪ್ರಕಾರ ಮುಂದುವರಿಯಲಾಗುವುದು’ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.