ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಯ ವೇತನಕ್ಕಾಗಿ₹961 ಕೋಟಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈಗಾಗಲೇ ಜೂನ್ ಮತ್ತು ಜುಲೈ ಸಂಬಳಕ್ಕಾಗಿ ₹426 ಕೋಟಿ ಬಿಡುಗಡೆ ಮಾಡಲಾಗಿದೆ. ಜೂನ್ ತಿಂಗಳಿಂದ ಸೆಪ್ಟೆಂಬರ್ ವರೆಗೆ ಒಟ್ಟು 4 ತಿಂಗಳು ವೇತನ ಭರಿಸಲು ಸರ್ಕಾರದಈ ನಿರ್ಧಾರಿಂದ ಅನುಕೂಲವಾದಂತಾಗಿದೆ ಎಂದು ಸವದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗೆ ಸವದಿ ವಂದನೆಗಳನ್ನು ಅರ್ಪಿಸಿದ್ದಾರೆ.