ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, 'ಕೃಷಿಕರು ಹಾಗೂ ಕೃಷಿಭೂಮಿಯ ನಡುವೆ ತಾಯಿ-ಮಗುವಿನ ಕರುಳಿನ ಸಂಬಂಧವಿದೆ. ಈಗ ಅದನ್ನೇ ಬೇರ್ಪಡಿಸಲು ಹೊರಟಿದ್ದಾರೆ. ತಾಯಿಯನ್ನೇ ಮಾರಾಟ ಮಾಡಲು ಹೊರಟಿರುವ ಈ ಕಾರ್ಯ ನಾಡಿನ ನೆಲ-ಜಲದ ಪ್ರಶ್ನೆಯಾಗಿದೆ. ಈ ಕರಾಳ ಶಾಸನದ ವಿರುದ್ಧ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಒಂದಾಗಿ ಹೋರಾಟ ರೂಪಿಸಬೇಕಿದೆ. ಈ ಹೋರಾಟಕ್ಕೆ ನಾಡಿನ ಎಲ್ಲ ರೈತಾಪಿ ವರ್ಗ ಕೈಜೋಡಿಸಬೇಕು' ಎಂದು ಮನವಿ ಮಾಡಿದರು.