ನಗರದ ಪೇಟೆ ಬೀದಿ ನಿವಾಸಿ ಪ್ರದೀಪ್ ಅವರ ಪುತ್ರಿಗೆ ಬೆಳಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಮೊದಲಿಗೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಮಕ್ಕಳ ತಜ್ಞರು ಲಭ್ಯವಿಲ್ಲದ ಕಾರಣ ಮಕ್ಕಳ ತಜ್ಞ ರಾಜಣ್ಣ ಬಳಿ, ಹಾಗೂ ನಂತರದಲ್ಲಿ ಬಿ.ಜಿ. ಲಿಂಗೇಗೌಡ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗೆ ಅಲೆದಿದ್ದಾರೆ.