ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ’2015ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಉತ್ತರ ಪತ್ರಿಕೆಗಳ ದೃಡೀಕೃತ ಪ್ರತಿಯನ್ನು ನೀಡಲು ನಿರಾಕರಿಸುತ್ತಿರುವುದು ಸರಿಯಲ್ಲ. ಇದರಿಂದಾಗಿ ಕೆಪಿಎಸ್ಸಿ ಏನನ್ನೋ ಬಚ್ಚಿಡಲು ಪ್ರಯತ್ನಿಸುತ್ತಿದೆ ಎಂಬ ಗುಮಾನಿ ಮೂಡಲು ಕಾರಣವಾಗಿದೆ,’ ಎಂದು ಹೇಳಿದ್ದಾರೆ.