ದಾವಣಗೆರೆ: ರಾಮ ಜ್ಯೋತಿ ರಥಯಾತ್ರೆ 1990ರಲ್ಲಿ ದಾವಣಗೆರೆಗೆ ಬಂದಿದ್ದಾಗ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟವರ ಸವಿನೆನಪಿಗಾಗಿ ₹10 ಲಕ್ಷದ ಮೌಲ್ಯದ 15 ಕೆ.ಜಿ. ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಯೋಧ್ಯೆ ರಾಮಮಂದಿರಕ್ಕೆ ನೀಡಲು ಇಲ್ಲಿನ ಶ್ರೀರಾಮ ಭಕ್ತರು ಹಾಗೂ ಹಿಂದುತ್ವಪರ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ.