ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಕಾರ ಸಂಘಗಳ ಚುನಾವಣೆ ಡಿಸೆಂಬರ್‌ವರೆಗೆ ಮುಂದೂಡಿಕೆ’

Last Updated 14 ಜುಲೈ 2020, 19:44 IST
ಅಕ್ಷರ ಗಾತ್ರ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳ ಚುನಾವಣೆಯನ್ನು ಡಿಸೆಂಬರ್‌ವರೆಗೆ ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಈ ಸಂಬಂಧ ಸಹಕಾರ ಇಲಾಖೆ ಅಧಿಕೃತ ಆದೇಶವನ್ನೂ ಹೊರಡಿಸಿದೆ. ಆಡಳಿತ ಮಂಡಳಿಗಳ ಅವಧಿ ಮುಕ್ತಾಯವಾಗಿದ್ದರೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಲಾಕ್‌ಡೌನ್‌ ಸಂದರ್ಭದಲ್ಲಿ ಒಮ್ಮೆ ಚುನಾವಣೆ ಮುಂದೂಡಲಾಗಿತ್ತು. ಲಾಕ್‌ಡೌನ್‌ ಸಡಿಲಿಸಿದ ಬಳಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಈಗಾಗಲೇ ಚುನಾವಣಾ ವೇಳಾ ಪಟ್ಟಿ ಹೊರಡಿಸಿ, ಚುನಾವಣಾ ಪ್ರಕ್ರಿಯೆ ಬಾಕಿ
ಇದ್ದಲ್ಲಿ, ತಕ್ಷಣದಿಂದಲೇ‍ಪ್ರಕ್ರಿಯೆ ರದ್ದುಪಡಿಸಬೇಕು. ಅವಧಿ ಮುಗಿದಿರುವ ಮತ್ತು ಮುಗಿಯಲಿರುವ ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT