ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ, ‘ಸ್ಥಳದಲ್ಲಿ ಖುದ್ದಾಗಿ ನಾನೇ ಇದ್ದೆ. ಮಾರ್ಗಸೂಚಿಗಳ ಪ್ರಕಾರ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆದಿದೆ. ಸ್ಟೆಚರ್ನಿಂದ ಚಿತೆಗೆ ಹಾಕುವುದನ್ನೇ ಎಸೆಯಲಾಗಿದೆ; ಅವಮಾನಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬಿಂಬಿಸಲಾಗಿದೆ. ಕೋವಿಡ್ ಭೀತಿಯ ನಡುವೆಯೂ ಕೆಲಸ ಮಾಡುವ ಸಿಬ್ಬಂದಿಯ ಆತ್ಮಸ್ಥೈರ್ಯ ಕುಗ್ಗಿಸುವಂತಹ ಟೀಕೆಗಳನ್ನು ಮಾಡಬಾರದು’ ಎಂದು ಹೇಳಿದರು.