ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಶಿಕ್ಷಣ ನೀತಿ ತಿಂಗಳಲ್ಲಿ ಅಂತಿಮ: ಸಚಿವ ಎಸ್.ಸುರೇಶ್‌ಕುಮಾರ್

Last Updated 31 ಜುಲೈ 2020, 16:53 IST
ಅಕ್ಷರ ಗಾತ್ರ

ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರವಾಗಿಟ್ಟುಕೊಂಡು ಕರ್ನಾಟಕ ನೂತನ ಶಿಕ್ಷಣ ನೀತಿಯನ್ನು ಆ.20ರ ವೇಳೆಗೆ ಘೋಷಿಸುವ ಆಶಯ ಇದೆ.ಈ ನೀತಿಯನ್ನು ಜಾರಿಗೊಳಿಸಲಿರುವ ಮೊದಲ ರಾಜ್ಯ ನಮ್ಮದಾಗಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದರು.

ಈ ಕುರಿತು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ರಾಜ್ಯಕ್ಕೆ ವಿಶೇಷ ಶಿಕ್ಷಣ ನೀತಿ ರೂಪಿಸಲು ಕಳೆದ ಫೆಬ್ರುವರಿಯಲ್ಲಿ ಸಮಿತಿ ರಚಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದ ನೀತಿಗಳನ್ನು ಅಭ್ಯಸಿಸಿ, ಹೊಸ ಶಿಕ್ಷಣ ನೀತಿಯನ್ನು ಹೊರತರಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿಯ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್‌ ಅವರೊಂದಿಗೆ ವೆಬಿನಾರ್‌ನಲ್ಲಿ ಸಂವಾದ ನಡೆಸಿದ ಸುರೇಶ್‌ಕುಮಾರ್, ‘ಇಂದಿನ ಹಾಗೂ ಭವಿಷ್ಯದ ಶೈಕ್ಷಣಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು34 ವರ್ಷಗಳ ಬಳಿಕ ರೂಪಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರವಾಗಿದ್ದು, ಇದನ್ನುಅನುಷ್ಠಾನಗೊಳಿಸಲು ರಾಜ್ಯಸರ್ಕಾರ ಉತ್ಸುಕವಾಗಿದೆ’ ಎಂದರು.

‘ದೇಶದ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಜನಗಳನ್ನು ಪಡೆಯುವ ಮುನ್ನವೇ ದೂರದೃಷ್ಟಿಯ ಧ್ಯೇಯಗಳನ್ನು ಅಳವಡಿಸಿಕೊಂಡ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ’ ಎಂದು ಕಸ್ತೂರಿರಂಗನ್‌ ಹೇಳಿದರು.

ವಿಧಾನಪರಿಷತ್ ಸದಸ್ಯರಾದ ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ. ಜಗದೀಶ್, ಸಮಗ್ರ ಶಿಕ್ಷಣದ ಕರ್ನಾಟಕ ಯೋಜನಾ ನಿರ್ದೇಶಕಿ ದೀಪಾ ಚೋಳನ್ ಹಾಗೂ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT