ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೋವಿಡ್-19 ಸೋಂಕು ತಗುಲಿದೆ.
ಸದ್ಯ ಮಣಿಪಾಲದ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
'ಎರಡು ದಿನಗಳಿಂದ ಜ್ವರವಿದ್ದ ಕಾರಣ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸ್ವಾಮೀಜಿ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.