ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್ ಕಾರಣದಿಂದಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಈ ಮಧ್ಯೆ, ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ, ಅನುತ್ತೀರ್ಣರಾಗಿರುವ (ಬ್ಯಾಕ್ಲಾಗ್) ಹಿಂದಿನ ಸೆಮಿಸ್ಟರ್ಗಳ ವಿಷಯಗಳ ಪರೀಕ್ಷೆ ನಡೆಸದಿರಲುಕೆಲವು ವಿಶ್ವವಿದ್ಯಾಲಯಗಳು ತೀರ್ಮಾನಿಸಿರುವ ಸಂಗತಿ ಗಮನಕ್ಕೆ ಬಂದಿದೆ. ಇದು ಅಕ್ಷಮ್ಯ ಅಪರಾಧ’ ಎಂದರು.